ಬ್ರೇಕಿಂಗ್ ನ್ಯೂಸ್
15-05-24 12:21 pm HK News Desk ಕ್ರೈಂ
ಹುಬ್ಬಳ್ಳಿ, ಮೇ.15: ನೇಹಾ ಹಿರೇಮಠ ಹತ್ಯೆ ಕೇಸ್ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮತ್ತೊಬ್ಬ ಯುವತಿಯೊಬ್ಬಳ ಕೊಲೆಯಾಗಿದೆ.
ನೇಹಾ ಕೊಲೆಯಾದ ಮಾದರಿಯಲ್ಲಿಯೇ ಸಾಯಿಸುವೆ ಎಂದು ಎಚ್ಚರಿಸಿದ್ದ ಯುವಕ ನಸುಕಿನಲ್ಲಿ ಯುವತಿ ಮನೆಗೆ ನುಗ್ಗಿ ಚೂರಿಯಿಂದ ತಿವಿದು ಭೀಕರ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿ. ಈಕೆಯನ್ನು ಮೈಸೂರು ಮೂಲದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಮನೆಯವರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಯುವಕ ಕಳೆದ ಹಲವು ಸಮಯದಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಬುಧವಾರ ಬೆಳಂಬೆಳ್ಳಗ್ಗೆ ವೀರಾಪುರ ಓಣಿಯಲ್ಲಿನ ಅಂಜಲಿ ನಿವಾಸಕ್ಕೆ ತೆರಳಿ ಮನೆಯ ಬಾಗಿಲು ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದಿದ್ದಾನೆ. ಸಮಾಧಾನವಾಗದೇ ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿದ್ದಾನೆ. ಮನೆಯವರು ಬಿಡಿಸಲು ಹೋದರೂ ಎಳೆದಾಡಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಯುವಕ ಮೃತ ಯುವತಿಯನ್ನು ಮೈಸೂರು ಪ್ರವಾಸಕ್ಕೆ ಬಾ ಎಂದು ಕಾಡುತ್ತಿದ್ದ. ಒಂದು ವೇಳೆ ನೀನು ನನ್ನ ಜೊತೆ ಬರದೆ ಹೋದ್ರೆ ನೇಹಾಗೆ ಆದ ಹಾಗೆಯೇ ನಿನಗೂ ಮಾಡ್ತೀನಿ ಎಂದು ಧಮ್ಕಿ ಹಾಕಿದ್ದ. ಕೃತ್ಯ ಎಸಗಿದ ಗಿರೀಶ್ ಸಾವಂತ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಕೇಸು ದಾಖಲಾಗಿತ್ತು.
ಇನ್ನು ಆರೋಪಿ ಗಿರೀಶ್ ಸಾವಂತ ಅಂಜಲಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಪೊಲೀಸರು ನಿಗಾ ವಹಿಸಲಿಲ್ಲ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ. ಇದೆಲ್ಲ ಮೂಢನಂಬಿಕೆ, ಹಾಗೇನೂ ಆಗಲ್ಲ ಎಂದು ಬೆಂಡಿಗೇರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಬೆಳಗ್ಗಿನಿಂದಲೇ ಹುಬ್ಬಳ್ಳಿ ನಗರದಾದ್ಯಂತ ಎಲರ್ಟ್ ಮಾಡಿದ ಪೊಲೀಸರು ಆರೋಪಿಯನ್ನು ಮಧ್ಯಾಹ್ನ ವೇಳೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
20 year old Anjali brutally killed for rejecting love in Hubballi. The arrested has been identified as Girish. He was threatening Anjali of killing her just like Neha Hiremath if she didn't agree for his love proposal. He entered Anjalis house and killed her by Stabbing her several times.
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 05:23 pm
HK News Staffer
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm