ಬ್ರೇಕಿಂಗ್ ನ್ಯೂಸ್
15-05-24 12:21 pm HK News Desk ಕ್ರೈಂ
ಹುಬ್ಬಳ್ಳಿ, ಮೇ.15: ನೇಹಾ ಹಿರೇಮಠ ಹತ್ಯೆ ಕೇಸ್ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮತ್ತೊಬ್ಬ ಯುವತಿಯೊಬ್ಬಳ ಕೊಲೆಯಾಗಿದೆ.
ನೇಹಾ ಕೊಲೆಯಾದ ಮಾದರಿಯಲ್ಲಿಯೇ ಸಾಯಿಸುವೆ ಎಂದು ಎಚ್ಚರಿಸಿದ್ದ ಯುವಕ ನಸುಕಿನಲ್ಲಿ ಯುವತಿ ಮನೆಗೆ ನುಗ್ಗಿ ಚೂರಿಯಿಂದ ತಿವಿದು ಭೀಕರ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿ. ಈಕೆಯನ್ನು ಮೈಸೂರು ಮೂಲದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಮನೆಯವರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಯುವಕ ಕಳೆದ ಹಲವು ಸಮಯದಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಬುಧವಾರ ಬೆಳಂಬೆಳ್ಳಗ್ಗೆ ವೀರಾಪುರ ಓಣಿಯಲ್ಲಿನ ಅಂಜಲಿ ನಿವಾಸಕ್ಕೆ ತೆರಳಿ ಮನೆಯ ಬಾಗಿಲು ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದಿದ್ದಾನೆ. ಸಮಾಧಾನವಾಗದೇ ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿದ್ದಾನೆ. ಮನೆಯವರು ಬಿಡಿಸಲು ಹೋದರೂ ಎಳೆದಾಡಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ಯುವಕ ಮೃತ ಯುವತಿಯನ್ನು ಮೈಸೂರು ಪ್ರವಾಸಕ್ಕೆ ಬಾ ಎಂದು ಕಾಡುತ್ತಿದ್ದ. ಒಂದು ವೇಳೆ ನೀನು ನನ್ನ ಜೊತೆ ಬರದೆ ಹೋದ್ರೆ ನೇಹಾಗೆ ಆದ ಹಾಗೆಯೇ ನಿನಗೂ ಮಾಡ್ತೀನಿ ಎಂದು ಧಮ್ಕಿ ಹಾಕಿದ್ದ. ಕೃತ್ಯ ಎಸಗಿದ ಗಿರೀಶ್ ಸಾವಂತ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಕೇಸು ದಾಖಲಾಗಿತ್ತು.
ಇನ್ನು ಆರೋಪಿ ಗಿರೀಶ್ ಸಾವಂತ ಅಂಜಲಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಪೊಲೀಸರು ನಿಗಾ ವಹಿಸಲಿಲ್ಲ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ. ಇದೆಲ್ಲ ಮೂಢನಂಬಿಕೆ, ಹಾಗೇನೂ ಆಗಲ್ಲ ಎಂದು ಬೆಂಡಿಗೇರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಬೆಳಗ್ಗಿನಿಂದಲೇ ಹುಬ್ಬಳ್ಳಿ ನಗರದಾದ್ಯಂತ ಎಲರ್ಟ್ ಮಾಡಿದ ಪೊಲೀಸರು ಆರೋಪಿಯನ್ನು ಮಧ್ಯಾಹ್ನ ವೇಳೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
20 year old Anjali brutally killed for rejecting love in Hubballi. The arrested has been identified as Girish. He was threatening Anjali of killing her just like Neha Hiremath if she didn't agree for his love proposal. He entered Anjalis house and killed her by Stabbing her several times.
02-05-25 10:52 am
Bangalore Correspondent
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 12:23 pm
Mangalore Correspondent
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm