ಬ್ರೇಕಿಂಗ್ ನ್ಯೂಸ್
16-05-24 01:42 pm HK News Desk ಕ್ರೈಂ
ಹುಬ್ಬಳ್ಳಿ, ಮೇ 16: ಬುಧವಾರ ಬೆಳಗ್ಗೆ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ ಕಾನ್ಸ್ಟೇಬಲ್ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಹೆಡ್ ಕಾನ್ಸ್ಟೇಬಲ್ ರೇಖಾ ಹಾವರಡ್ಡಿ ಅಮಾನತಾದ ಸಿಬ್ಬಂದಿ.
ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಎಂಬಾತ ಆಕೆಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಸ್ಥರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, "ಅಂಜಲಿಯನ್ನು ವಿಶ್ವನಾಥ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದೇ ಇದ್ದಾಗ ನೇಹಾ ಹಿರೇಮಠಗೆ ಆದ ಹಾಗೆಯೇ ನಿನಗೂ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡಿದ್ದ ನಾವು ಈ ಬಗ್ಗೆ ತಿಳಿಸಲು ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಪೊಲೀಸರು "ಇವೆಲ್ಲಾ ಮೂಢನಂಬಿಕೆ" ಎಂದು ಹೇಳಿ ಘಟನೆಯನ್ನು ನಿರ್ಲರ್ಕ್ಷಿಸಿದ್ದರು. ಅಂದೇ ಆರೋಪಿಯ ಮೇಲೆ ಕಠಿಣ ಕ್ರಮ ತೆಗೆದುಕೊಂಡು, ಪ್ರಕರಣ ದಾಖಲಿಸುತ್ತಿದ್ದರೆ ಹತ್ಯೆ ತಪ್ಪಿಸಬಹುದಿತ್ತು" ಎಂದು ಆರೋಪಿಸಿದ್ದಾರೆ.
ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಬಸವರಾಜ ಬೊಮ್ಮಾಯಿ:
ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ
ಗದಗನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Hubballi Anjali murder case Bendigeri Police Inspector C B Chikkodi and woman head constable suspended. After ordering an investigation by DCP (crime and traffic) into the matter, Police Commissioner Renuka Sukumar suspended Bendigeri Police Inspector C B Chikkodi and woman head constable Rekha Havaraddi from service, on charges of dereliction of duty.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm