ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm