ಬ್ರೇಕಿಂಗ್ ನ್ಯೂಸ್
17-05-24 02:09 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಗೃಹ ಸಚಿವ ಪರಮೇಶ್ವರ ಆಪ್ತ ಅಂತ ಹೇಳ್ಕೊಂಡು ಸಾರ್ವಜನಿಕರನ್ನ ವಂಚಿಸುತ್ತಿದ್ದ ತುಮಕೂರು ಜಿಲ್ಲೆ ಕೊರಟಗೆರೆಯ ಮಹಮ್ಮದ್ ಜುಬೇರ್ ಎಂಬಾತನನ್ನ ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
33 ವರ್ಷದ ಜುಬೇರ್, ಮೆಡಿಕಲ್ ಸೀಟು, ಕಡಿಮೆ ಬೆಲೆಗೆ ಸೈಟ್, ವಿವಿಧ ಬ್ಯಾಂಕ್ ಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕೆಂಗೇರಿ ನಿವಾಸಿ ಸಾಯಿದ ತಬಸುಂ ಎಂಬುವರು ದೂರು ಸಲ್ಲಿಸಿ, ಜುಬೇರ್ ತನಗೆ ರೂ. 1.20 ಕೋಟಿ ಹಾಗೂ 186 ಗ್ರಾಂ ಚಿನ್ನಾಭರಣಗಳನ್ನು ವಂಚನೆ ಮಾಡಿದ್ದಾನೆ ಎಂದು ಆಪಾದಿಸಿದ್ಧರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಆರೋಪಿ ಜುಬೇರ್ ವಂಚಿಸಿದ್ದ 80 ಲಕ್ಷ ರೂ. ಹಣದ ಮಾಹಿತಿ ಸಿಕ್ಕಿದ್ದು, ಉಳಿದ ಹಣವನ್ನು ಎಲ್ಲಿ ಅಡಗಿಸಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಹಣವನ್ನು ಪತ್ತೆ ಮಾಡಲು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರ ಸ್ವಕ್ಷೇತ್ರ ಕೊರಟಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರ ಆಪ್ತ ಎಂದು ಬಿಂಬಿಸಿಕೊಂಡು ಓಡಾಡುತ್ತಿದ್ದ. ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರಿನ ನಕಲಿ ಸೀಲ್ ಮತ್ತು ನಕಲಿ ಲೆಟರ್ ಹೆಡ್ ಗಳನ್ನು ಬಳಸಿಕೊಂಡು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಗೃಹ ಸಚಿವರ ಜೊತೆಗಿರುವ ಭಾವಚಿತ್ರ ಹಾಗೂ ವಿಡಿಯೊಗಳನ್ನು ತೋರಿಸಿಕೊಂಡು ಸಾರ್ವಜನಿಕರನ್ನು ನಂಬಿಸುತ್ತಿದ್ದ. ಕೆಂಗೇರಿ, ತುಮಕೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ 14 ದೂರುಗಳು ದಾಖಲಾಗಿವೆ. ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾರ್ವಜನಿಕರನ್ನು ಹಣ ಪಡೆದು ವಂಚಿಸುತ್ತಿದ್ದ ಎನ್ನುವ ದೂರುಗಳು ಬಂದಿದ್ದವು.
ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ಮೋಜಿನಜೀವನ ನಡೆಸುತ್ತಿದ್ದ. ಇಟ್ಟಿಗೆ ಫ್ಯಾಕ್ಟರಿಗಳಿಗೆ ಅಕ್ರಮವಾಗಿ ಮಣ್ಣು ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
Bangalore 33 year old arrested for cheating in crores. The arrested has been identified as Juber from Tumkuru. He was cheating people in the name of getting medical College seat, and sites for less rate. It is said he used to carry fake seals of officers.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm