ಬ್ರೇಕಿಂಗ್ ನ್ಯೂಸ್
17-05-24 02:09 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಗೃಹ ಸಚಿವ ಪರಮೇಶ್ವರ ಆಪ್ತ ಅಂತ ಹೇಳ್ಕೊಂಡು ಸಾರ್ವಜನಿಕರನ್ನ ವಂಚಿಸುತ್ತಿದ್ದ ತುಮಕೂರು ಜಿಲ್ಲೆ ಕೊರಟಗೆರೆಯ ಮಹಮ್ಮದ್ ಜುಬೇರ್ ಎಂಬಾತನನ್ನ ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
33 ವರ್ಷದ ಜುಬೇರ್, ಮೆಡಿಕಲ್ ಸೀಟು, ಕಡಿಮೆ ಬೆಲೆಗೆ ಸೈಟ್, ವಿವಿಧ ಬ್ಯಾಂಕ್ ಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕೆಂಗೇರಿ ನಿವಾಸಿ ಸಾಯಿದ ತಬಸುಂ ಎಂಬುವರು ದೂರು ಸಲ್ಲಿಸಿ, ಜುಬೇರ್ ತನಗೆ ರೂ. 1.20 ಕೋಟಿ ಹಾಗೂ 186 ಗ್ರಾಂ ಚಿನ್ನಾಭರಣಗಳನ್ನು ವಂಚನೆ ಮಾಡಿದ್ದಾನೆ ಎಂದು ಆಪಾದಿಸಿದ್ಧರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಆರೋಪಿ ಜುಬೇರ್ ವಂಚಿಸಿದ್ದ 80 ಲಕ್ಷ ರೂ. ಹಣದ ಮಾಹಿತಿ ಸಿಕ್ಕಿದ್ದು, ಉಳಿದ ಹಣವನ್ನು ಎಲ್ಲಿ ಅಡಗಿಸಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಹಣವನ್ನು ಪತ್ತೆ ಮಾಡಲು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರ ಸ್ವಕ್ಷೇತ್ರ ಕೊರಟಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರ ಆಪ್ತ ಎಂದು ಬಿಂಬಿಸಿಕೊಂಡು ಓಡಾಡುತ್ತಿದ್ದ. ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರಿನ ನಕಲಿ ಸೀಲ್ ಮತ್ತು ನಕಲಿ ಲೆಟರ್ ಹೆಡ್ ಗಳನ್ನು ಬಳಸಿಕೊಂಡು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಗೃಹ ಸಚಿವರ ಜೊತೆಗಿರುವ ಭಾವಚಿತ್ರ ಹಾಗೂ ವಿಡಿಯೊಗಳನ್ನು ತೋರಿಸಿಕೊಂಡು ಸಾರ್ವಜನಿಕರನ್ನು ನಂಬಿಸುತ್ತಿದ್ದ. ಕೆಂಗೇರಿ, ತುಮಕೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ 14 ದೂರುಗಳು ದಾಖಲಾಗಿವೆ. ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾರ್ವಜನಿಕರನ್ನು ಹಣ ಪಡೆದು ವಂಚಿಸುತ್ತಿದ್ದ ಎನ್ನುವ ದೂರುಗಳು ಬಂದಿದ್ದವು.
ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ಮೋಜಿನಜೀವನ ನಡೆಸುತ್ತಿದ್ದ. ಇಟ್ಟಿಗೆ ಫ್ಯಾಕ್ಟರಿಗಳಿಗೆ ಅಕ್ರಮವಾಗಿ ಮಣ್ಣು ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
Bangalore 33 year old arrested for cheating in crores. The arrested has been identified as Juber from Tumkuru. He was cheating people in the name of getting medical College seat, and sites for less rate. It is said he used to carry fake seals of officers.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm