ಬ್ರೇಕಿಂಗ್ ನ್ಯೂಸ್
18-05-24 04:05 pm HK News Desk ಕ್ರೈಂ
ವಿಜಯಪುರ, ಮೇ.18: ಹತ್ತಿ ಮಾರಾಟ ಮಾಡಿದ ಹಣದೊಂದಿಗೆ ವ್ಯಾಪಾರಿಯ ನೌಕರರು ಕ್ಯಾಂಟರ್ ನಲ್ಲಿ ಮರಳುತ್ತಿದ್ದಾಗ ಕ್ಯಾಂಟರ್ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದೋಚಿರುವ ದರೋಡೆ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೀವರ್ಗಿ ಮೂಲದ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬವರಿಗೆ ಸೇರಿದ ಹಣ. 32 ಲಕ್ಷ ರೂ. ಹಣ ತರುತ್ತಿದ್ದ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲಿ ಕೊಡಚಿ ದರೋಡೆಕೋರರಿಂದ ಹಲ್ಲೆಗೊಳಗಾಗಿ ಹಣ ಕಳೆದುಕೊಂಡವರು.
ಧಾರವಾಡ ಬಳಿಯ ಅಮ್ಮೀನಭಾವಿ ಗ್ರಾಮದಲ್ಲಿರುವ ಅರಳೆ ಕಾರ್ಖಾನೆಗೆ ಚಂದ್ರಕಾಂತ ಹತ್ತಿ ಮಾರಾಟ ಮಾಡಿದ್ದರು. ಹತ್ತಿ ಮಾರಾಟದಿಂದ ಬಂದಿದ್ದ 32 ಲಕ್ಷ ರೂ. ಹಣದೊಂದಿಗೆ ಹತ್ತಿ ಸಾಗಿಸಿದ್ದ ಕ್ಯಾಂಟರ್ ನಲ್ಲೇ ಚಾಲಕ ಮಹಾಂತೇಶ, ಸಹಾಯಕ ಮಲ್ಲು ಜೀವರ್ಗಿಗೆ ಮರಳುತ್ತಿದ್ದರು.
ಈ ಹಂತದಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ಬಳಿ ಬುಲೆರೋ ವಾಹನದಲ್ಲಿ ಬಂದ ದರೋಡೆಕೋರರು, ಕ್ಯಾಂಟರ್ ಅಡ್ಡಗಟ್ಟಿ, ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಕ್ಯಾಂಟರ್ ಗಾಜು ಒಡೆದು ವಾಹನ ನಿಲ್ಲಿಸಿದ್ದಾರೆ. ಬಳಿಕ ಮಹಾಂತೇಶ ಹಾಗೂ ಮಲ್ಲು ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿದ್ದಾರೆ.
ಬಳಿಕ 32 ಲಕ್ಷ ರೂ. ಹಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರಿಂದ ಹಲ್ಲೆಗೊಳಗಾದ ಮಹಾಂತೇಶ, ಮಲ್ಲು ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಲೇ ವಿಜಯಪುರ ಜಿಲ್ಲೆಯ ಎಸ್ಪಿ ರಿಷಿಕೇಶ ಭಗವಾನ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕೊಲ್ಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ.
Thieves stop truck attack driver with chilly power and flee with 38 lakhs cash at Vijayapura. Both driver and clear were tharashed using iron rod. Miscreants who came in bolero car flee from spot. They were carrying cash that came for selling cotton.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm