ಬ್ರೇಕಿಂಗ್ ನ್ಯೂಸ್
21-05-24 01:28 pm HK News Desk ಕ್ರೈಂ
ಮೈಸೂರು, ಮೇ 21: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ಅವರ ಶವವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಕೊಲೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೊಲೆಗೆ ನಿಖರ ಕಾರಣ ಎಂದು ತಿಳಿದು ಬೇಕಿದ್ದು, ಈ ಬಗ್ಗೆ ಪೊಲೀಸರು ಕುಟುಂಬಸ್ಥರು ಹಾಗೂ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆ ಬಳಿಕ ಆರೋಪಿ ನಂದೀಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನಂತೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಡಾ.ನಂದಿನಿ, ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರನೆ ಶುರು ಮಾಡಿದ್ದು, ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Mysuru Congress leader cum actress murdered by husband over family issue. The deceased has been identified as Vidhya. Husband who killed her has fleed away from the spot and police are now investigating the case.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm