ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm