ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am