ಬ್ರೇಕಿಂಗ್ ನ್ಯೂಸ್
31-05-24 02:10 am Bengaluru Correspondent ಕ್ರೈಂ
ಬೆಂಗಳೂರು, ಮೇ 31: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಡೆಗೂ ಸೆರೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ವಿದೇಶದಲ್ಲಿ ಭೂಗತರಾಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಪ್ರಜ್ವಲ್, ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳು ಬಹಿರಂಗವಾದ ಬೆನ್ನಲ್ಲೇ ಏ.26ರಂದು ರಾತ್ರೋರಾತ್ರಿ ಜರ್ಮನಿಗೆ ಪಲಾಯನ ಮಾಡಿದ್ದ ಪ್ರಜ್ವಲ್, 34 ದಿನಗಳಿಂದ ಭೂಗತರಾಗಿದ್ದರು. ದುಬೈ, ಲಂಡನ್, ಜರ್ಮನಿಗೆ ವಾಸ್ತವ್ಯ ಬದಲಿಸಿದ್ದ ಅವರು, ಮೇ 27ರಂದು ವಿದೇಶದಿಂದಲೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿ, ಶುಕ್ರವಾರ (ಮೇ 31) ರಾಜ್ಯಕ್ಕೆ ಮರಳಿ ಎಸ್ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಇದರ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್ನಿಂದ ಗುರುವಾರ ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ(ಎಲ್ ಎಚ್ 764) ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾಯ್ದಿರಿಸಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್ನಿಂದ ಹೊರಟ ಆ ವಿಮಾನ ತಡರಾತ್ರಿ 12. 50 ಕ್ಕೆ ಬೆಂಗಳೂರಿನ ಕೆಐಎಎಲ್ಗೆ ಬಂದಿತು.
ಪ್ರಜ್ವಲ್ರ ಬಂಧನದ ಹಿನ್ನೆಲೆಯಲ್ಲಿಯಾವುದೇ ಸಮಸ್ಯೆಯಾಗದಂತೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರೊಂದಿಗೆ ಬೆಳಗ್ಗೆ ಸಭೆ ನಡೆಸಿದ್ದರು. ಎಸ್ಐಟಿ ಅಧಿಕಾರಿಗಳ ಮನವಿಯಂತೆ ಕೆಐಎಎಲ್ ಬಳಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
Janata Dal (Secular) leader Prajwal Revanna, who is accused of sexually abusing numerous women, returned to India on the intervening night of Thursday around 1:15am from Berlin, Germany, nearly a month after leaving the country on a diplomatic passport. He was immediately taken into custody.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm