ಬ್ರೇಕಿಂಗ್ ನ್ಯೂಸ್
31-05-24 02:10 am Bengaluru Correspondent ಕ್ರೈಂ
ಬೆಂಗಳೂರು, ಮೇ 31: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಡೆಗೂ ಸೆರೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ವಿದೇಶದಲ್ಲಿ ಭೂಗತರಾಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಪ್ರಜ್ವಲ್, ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳು ಬಹಿರಂಗವಾದ ಬೆನ್ನಲ್ಲೇ ಏ.26ರಂದು ರಾತ್ರೋರಾತ್ರಿ ಜರ್ಮನಿಗೆ ಪಲಾಯನ ಮಾಡಿದ್ದ ಪ್ರಜ್ವಲ್, 34 ದಿನಗಳಿಂದ ಭೂಗತರಾಗಿದ್ದರು. ದುಬೈ, ಲಂಡನ್, ಜರ್ಮನಿಗೆ ವಾಸ್ತವ್ಯ ಬದಲಿಸಿದ್ದ ಅವರು, ಮೇ 27ರಂದು ವಿದೇಶದಿಂದಲೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿ, ಶುಕ್ರವಾರ (ಮೇ 31) ರಾಜ್ಯಕ್ಕೆ ಮರಳಿ ಎಸ್ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಇದರ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್ನಿಂದ ಗುರುವಾರ ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ(ಎಲ್ ಎಚ್ 764) ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾಯ್ದಿರಿಸಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್ನಿಂದ ಹೊರಟ ಆ ವಿಮಾನ ತಡರಾತ್ರಿ 12. 50 ಕ್ಕೆ ಬೆಂಗಳೂರಿನ ಕೆಐಎಎಲ್ಗೆ ಬಂದಿತು.
ಪ್ರಜ್ವಲ್ರ ಬಂಧನದ ಹಿನ್ನೆಲೆಯಲ್ಲಿಯಾವುದೇ ಸಮಸ್ಯೆಯಾಗದಂತೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರೊಂದಿಗೆ ಬೆಳಗ್ಗೆ ಸಭೆ ನಡೆಸಿದ್ದರು. ಎಸ್ಐಟಿ ಅಧಿಕಾರಿಗಳ ಮನವಿಯಂತೆ ಕೆಐಎಎಲ್ ಬಳಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
Janata Dal (Secular) leader Prajwal Revanna, who is accused of sexually abusing numerous women, returned to India on the intervening night of Thursday around 1:15am from Berlin, Germany, nearly a month after leaving the country on a diplomatic passport. He was immediately taken into custody.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm