ಬ್ರೇಕಿಂಗ್ ನ್ಯೂಸ್
05-06-24 01:56 pm HK News Desk ಕ್ರೈಂ
ಹಾಸನ, ಜೂ 05: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
Hassan notorious rowdy child Ravi brutally murdered in broad daylight in Hassan. Early morning miscreants in car rammed his bike and brutally killed child Ravi on June 5th early morning.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm