ಬ್ರೇಕಿಂಗ್ ನ್ಯೂಸ್
05-06-24 10:32 pm Mangaluru Correspondent ಕ್ರೈಂ
ಉಳ್ಳಾಲ, ಜೂ.5: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದ್ದು, ಆರೋಪಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಂಪಲ ಮೂರುಕಟ್ಟ , ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪಿಟ್ಟಿ ಯಾನೆ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ ಕುಂಪಲ ಸರಕಾರಿ ಶಾಲೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಪಟಾಕಿ ಸಿಡಿಸಿದ್ದ ಪ್ರದೇಶದಲ್ಲಿ ಸ್ಥಳೀಯ ಸಂಘ ಸಂಸ್ಥೆಯೊಂದರ ಕಾರ್ಯಾಲಯ ಇದ್ದು ,ಅವರ ಕಚೇರಿ ಮುಂದೆ ಪಟಾಕಿ ಸಿಡಿಸಿದ್ದರ ವಿರುದ್ಧ ಸಂಸ್ಥೆಯ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತನೆನ್ನಲಾದ, ಹಲ್ಲೆಗೊಳಗಾದ ಪ್ರವೀಣ್ ಅವರ ನೆರೆಮನೆಯ ಗೌತಮ್ ಬುಧವಾರ ಸಂಜೆ ಕುಂಪಲ ಬಾರ್ದೆ ಎಂಬಲ್ಲಿ ಪ್ರವೀಣ್ ಮೇಲೆ ದಾಳಿ ನಡೆಸಿದ್ದಾನೆ. ಕಾರಿನಲ್ಲಿ ಬಂದ ಗೌತಮ್ ಪ್ರವೀಣ್ಗೆ ಅವಾಚ್ಯವಾಗಿ ನಿಂದಿಸಿ ಕಬ್ಬಿಣದ ರಾಡ್ ನಿಂದ ತಲೆಗೆ ಹಲ್ಲೆಗೈದು ಮೊಬೈಲನ್ನ ಪುಡಿಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನ ಸ್ಥಳೀಯರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಳ್ಳಾಲ ಪೊಲೀಸರು ಆರೋಪಿ ಗೌತಮ್ ನನ್ನ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿದ್ದು ಹಲ್ಲೆಗೊಳಗಾದ ಪ್ರವೀಣ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಎರಗಿ ಹಲ್ಲೆಗೈಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಆರೋಪಿ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವುದಾಗಿ ರವೀಂದ್ರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪ್ರಕಾಶ್ ಸಿಂಪೋನಿ, ಜೀವನ್ ಕುಮಾರ್ ತೊಕ್ಕೊಟ್ಟು ಜತೆಯಲ್ಲಿದ್ದರು.
Mangalore Kumpala, a Hindu worker, attacked in a rod for bursting crackers for the BJP win. Some miscenats attacked Praveen Poojari for bursting crakers by celebrating BjP's win in Karnataka.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm