ಬ್ರೇಕಿಂಗ್ ನ್ಯೂಸ್
11-06-24 04:54 pm HK News Desk ಕ್ರೈಂ
ಮೈಸೂರು, ಜೂ 11: ಇಲ್ಲಿನ ಸಿದ್ದಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಗಳಾದ ಶಿವಾನಂದ ಸ್ವಾಮೀಜಿ (90) ಅವರ ಹತ್ಯೆಯಾಗಿದೆ. ಮಠದ ಆವರಣದಲ್ಲೇ ಸ್ವಾಮೀಜಿಯವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವಾಮೀಜಿಯವರ ಆಪ್ತನಾಗಿದ್ದ ರವಿ ಎಂಬಾತನೇ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಮೈಸೂರಿನ ನಜಾರಾಬಾದ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ತನಿಖೆ ನಡೆಸಿದ್ದಾರೆ.
ಆರೋಪಿ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಸ್ವಾಮೀಜಿಯವರನ್ನು ಮಠದ ಆವರಣದಲ್ಲೇ ಹತ್ಯೆ ಮಾಡಿದ್ದಾನೆನ್ನಲಾಗಿದೆ. ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲೇ ಸ್ವಾಮೀಜಿಯವರ ಶವ ಕಂಡುಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಮೋಲ್ನೋಟಕ್ಕೆ ಇದು ಆಸ್ತಿ ವಿಚಾರವಾಗಿ ಸ್ವಾಮೀಜಿ ಹಾಗೂ ರವಿ ನಡುವೆ ಇದ್ದ ಮನಸ್ತಾಪವೇ ಕೊಲೆಗೆ ಕಾರಣ ಎನ್ನಲಾಗಿದೆ.

ಕೊಲೆಯ ನಂತರ ರವಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಮದ್ಯ ಸೇವಿಸಿ ಆನಂತರ ವಿಷ ಕುಡಿದಿದ್ದ, ಆತನನ್ನು ವಶಕ್ಕೆ ಪಡೆಯುವ ಹೊತ್ತಿಗೆ ಆಗಲೇ ನಿತ್ರಾಣನಾಗಿದ್ದ. ಹಾಗಾಗಿ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಮೈಸೂರಿನ ಅನ್ನದಾನೇಶ್ವರ ಮಠದ ಭಕ್ತರಾದ ಹನುಮಂತ ಪಾಟೀಲ ಹಾಗೂ ಅವರ ಪತ್ನಿ ಈ ಹಿಂದೆ ಒಮ್ಮೆ ಇದೇ ಸ್ವಾಮೀಜಿ ವಿರುದ್ಧ ದೂರು ನೀಡಿದ್ದರು. ಬೆಳಗಾವಿಯಿಂದ ಮೈಸೂರಿಗೆ ಬಂದು ನೆಲೆಸಿದ್ದ ಈ ದಂಪತಿ 2011 ರಲ್ಲಿ ಸ್ವಾಮೀಜಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪಾಟೀಲ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ, ಪತ್ನಿ ಅಂಗನವಾಡಿಯಲ್ಲಿ ಕೆಲಸ ಮಾಡ್ತಿದ್ಲು . ಈ ದಂಪತಿ ಅನ್ನದಾನೇಶ್ವರ ಮಠದ ಶ್ರೀ ಮಹಾಶಿವಲಿಂಗ ಸ್ವಾಮೀಜಿ ಅವರ ಸೇವೆಯಲ್ಲಿ ತೊಡಗಿದ್ದ ವೇಳೆ ಮಠದ ಸ್ವಾಮೀಜಿಯು ದಂಪತಿಯಿಂದ ಒಂದೂವರೆ ಲಕ್ಷ ರೂ. ಹಣ ಪಡೆದಿದ್ರು.
ಇದಕ್ಕೆ ಬದಲಿಯಾಗಿ ಮಠದ ಆವರಣದಲ್ಲಿ ಜಾಗ ಕಲ್ಪಿಸುವ ಮಾತು ನೀಡಿ, ಅಲ್ಲಿ ನಿರ್ಮಾಣವಾಗುತ್ತಿದ್ದ ಕಾಂಪ್ಲೆಕ್ಸ್ ನ ಉಸ್ತುವಾರಿಯನ್ನು ಪಾಟೀಲ್ ಗೇ ನೀಡುವುದಾಗಿ ಸ್ವಾಮೀಜಿ ಮಾತು ಕೊಟ್ಟಿದ್ರು . ಆದರೆ ಇದ್ಯಾವುದು ನಡೆಯದೆ ಹೋದಾಗ, ಪಾಟೀಲ್ ದಂಪತಿ ಹಣ ನೀಡುವಂತೆ ಸ್ವಾಮೀಜಿಗೆ ಒತ್ತಾಯಿಸಿದ್ದಾರೆ . ಈ ರೀತಿ ಹಣ ಕೇಳಲು ಹೋದಾಗಲೇ ಪಾಟೀಲರ ಮಡದಿಯ ಕೈ ಹಿಡಿದು ಎಳೆದಾಡಿದ ಸ್ವಾಮೀಜಿ ಸೀರೆಗೂ ಕೈ ಹಾಕಿದ ಎಂದು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಲಾಗಿತ್ತು. ಬಹುಶಃ ಅದೇ ದ್ವೇಷವೇ ಕೊಲೆಗೆ ಕಾರಣವಾಗಿರಬಹುದೇ ಎಂದು ಪೊಲೀಸರು ಊಹಿಸಿದ್ದಾರೆ.
Sri Shivananda Swamiji (90) of Sri Annadaaneshwara Mutt, located adjacent to Teresian College on Male Mahadeshwara Road in Siddarthanagar in city, was found murdered in his room this morning. Reports indicate that the Swamiji was brutally hacked to death with a machete.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm