ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm