ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.
ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm