ಬ್ರೇಕಿಂಗ್ ನ್ಯೂಸ್
16-06-24 03:48 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 16: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಾಕೆ ಅಲ್ಲಿಂದಲೇ ಚಿನ್ನಾಭರಣ ಕದ್ದು ಅದನ್ನು ಚಿನ್ನದ ಗಟ್ಟಿಗಳನ್ನಾಗಿಸಿ ಮನೆಯಲ್ಲಿ ಬಚ್ಚಿಟ್ಟಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಈಕೆಯ ಬಳಿಯಿಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲವು ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕಪಾಟಿನಲ್ಲಿದ್ದ ಕೀ ತೆಗೆದುಕೊಂಡು ಅದರಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಮನೆಯವರು ಕಾರ್ಯಕ್ರಮ ಮುಗಿಸಿಕೊಂಡು ಮರಳಿ ತಿಂಗಳು ಕಳೆದರೂ ಕಪಾಟಿನಲ್ಲಿದ್ದ ಚಿನ್ನಾಭರಣ ಇಲ್ಲದಾಗಿರುವುದನ್ನು ಗಮನಿಸಿರಲಿಲ್ಲ. ಜೂನ್ 7ರಂದು ಅಮರೇಂದ್ರ ಕಪಾಟು ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿತ್ತು.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಗೆ ಅಮರೇಂದ್ರ ದೂರು ನೀಡಿದ್ದರು. ಕೆಲಸದಾಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
2023 ನವೆಂಬರ್ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ತಿಳಿದಿರುವುದು 6 ತಿಂಗಳ ಬಳಿಕ. ಕುಟುಂಬಸ್ಥರ ಜೊತೆಗೆ ತೆರಳಿದ್ದಾಗ ಮನೆಯಲ್ಲಿ ಮಮತಾ ಒಬ್ಬಳೇ ಇದ್ದ ಕಾರಣ ಆಕೆಯ ಮೇಲೆ ಅನುಮಾನ ಮೂಡಿತ್ತು. ಆಕೆಯ ಮನೆಯಲ್ಲಿ ಶೋಧ ನಡೆಸಿದಾಗ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.
Police arrested a woman who was working as a housekeeper in the house of a businessman and stole gold jewelery from there and converted it into gold bars and hid it in the house.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm