ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm