ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm