ಬ್ರೇಕಿಂಗ್ ನ್ಯೂಸ್
20-06-24 04:32 pm HK News Desk ಕ್ರೈಂ
ಹಾಸನ, ಜೂ 20: ನಗರದ ಕೆ. ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದಲ್ಲಿ ಹಾಡಹಗಲೇ ಶೂಟೌಟ್ ನಡೆದಿದೆ. ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಿವೇಶನ ವಿಚಾರದಲ್ಲಿ ಆರಂಭವಾದ ಜಗಳ ಕೊಲೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮೃತರನ್ನು ಹಾಸನ ನಿವಾಸಿ ಶರಫತ್ ಅಲಿ ಹಾಗೂ ಬೆಂಗಳೂರು ನಿವಾಸಿ ಆಸಿಫ್ ಎಂದು ಗುರ್ತಿಸಲಾಗಿದೆ. ಸೈಟ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜೂನ್ 20 ಗುರುವಾರ ಮಧ್ಯಾಹ್ನ 12.30ಕ್ಕೆ ಈ ಘಟನೆ ನಡೆದಿದೆ ಎಂದು ಹೇಳಿದ್ಧಾರೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಎಫ್ಎಸ್ಎಲ್ ತಜ್ಞರನ್ನು ರವಾನೆ ಮಾಡಲಾಗಿದೆ. ತಜ್ಞರ ಪರಿಶೀಲನೆ ವೇಳೆ ಕಾರಿನ ಹೊರಗೆ ಇರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಸಿಕ್ಕ ಕಾರು ಮೈಸೂರು ಮೂಲದ್ದು ಎಂದು ಮಾಹಿತಿ ನೀಡಿದ್ದಾರೆ.
ಈ ಕೃತ್ಯದ ಪರಿಶೀಲನೆ ವೇಳೆ ಮೃತರ ಕಾರಿನಲ್ಲಿ ಒಂದು ಶಸ್ತ್ರಾಸ್ತ್ರ ಪತ್ತೆಯಾಗಿದೆ. ಮೃತರ ಪೈಕಿ ಓರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಕುರಿತಾಗಿ ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸಮಗ್ರ ಪರಿಶೀಲನೆ ನಡೆಸುತ್ತಿದ್ದು, ಪೊಲೀಸರ ತನಿಖೆ ವೇಳೆ ಇನ್ನಷ್ಟು ಮಾಹಿತಿ ಲಭ್ಯ ಆಗಲಿದೆ.
ಇಬ್ಬರ ಮೃತ ದೇಹವನ್ನೂ ಸದ್ಯ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಮೃತರ ಪೈಕಿ ಹಾಸನ ನಿವಾಸಿ ಶರಫತ್ ಅಲಿ ಅವರ ಕುಟುಂಬಸ್ಥರು ಘಟನಾ ಸ್ಥಳಕ್ಕೆ ಧಾವಿಸಿದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಯಲ್ಲಿ ಒಂದೇ ಸಮುದಾಯದ ಇಬ್ಬರು ಜಗಳ ಆಡಿಕೊಂಡು ಓರ್ವನ ಮೇಲೆ ಗುಂಡು ಹಾರಿಸಿ ಕೊಂದು, ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
Hassan shootout, businessman murdered, accused shoots himself. The fight was regarding some land matter. The deceased has been identified as Sharafath Ali and accused Asif from Bangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm