ಬ್ರೇಕಿಂಗ್ ನ್ಯೂಸ್
23-06-24 01:19 pm Mangalore Correspondent ಕ್ರೈಂ
ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಎಚ್ಚರಿಕೆ ಇರಲು ಪೊಲೀಸರ ಸೂಚನೆ
ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Mangalore Four hoses knocked by thieves at midnight of June 18th,flee after seeing police, Ulaibettu Dacoity gang suspected of moving around. Police have issued circular to be careful and not to open door unnecessarily
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm