ಬ್ರೇಕಿಂಗ್ ನ್ಯೂಸ್
23-06-24 01:19 pm Mangalore Correspondent ಕ್ರೈಂ
ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಎಚ್ಚರಿಕೆ ಇರಲು ಪೊಲೀಸರ ಸೂಚನೆ
ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Mangalore Four hoses knocked by thieves at midnight of June 18th,flee after seeing police, Ulaibettu Dacoity gang suspected of moving around. Police have issued circular to be careful and not to open door unnecessarily
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am