ಬ್ರೇಕಿಂಗ್ ನ್ಯೂಸ್
23-06-24 01:19 pm Mangalore Correspondent ಕ್ರೈಂ
ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಎಚ್ಚರಿಕೆ ಇರಲು ಪೊಲೀಸರ ಸೂಚನೆ
ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Mangalore Four hoses knocked by thieves at midnight of June 18th,flee after seeing police, Ulaibettu Dacoity gang suspected of moving around. Police have issued circular to be careful and not to open door unnecessarily
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm