ಬ್ರೇಕಿಂಗ್ ನ್ಯೂಸ್
23-06-24 01:19 pm Mangalore Correspondent ಕ್ರೈಂ
ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಎಚ್ಚರಿಕೆ ಇರಲು ಪೊಲೀಸರ ಸೂಚನೆ
ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Mangalore Four hoses knocked by thieves at midnight of June 18th,flee after seeing police, Ulaibettu Dacoity gang suspected of moving around. Police have issued circular to be careful and not to open door unnecessarily
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm