ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.
ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm