ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm