ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm