ಬ್ರೇಕಿಂಗ್ ನ್ಯೂಸ್
03-07-24 08:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 2: ಫೇಸ್ಬುಕ್ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಬಿಟ್ ಕಾಯಿನ್ ಮೇಲೆ ಹೂಡಿಕೆ ಮಾಡಲು ನೀಡಿದ ಸಲಹೆಯಂತೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ, ಮೋಸ ಹೋಗಿರುವ ಘಟನೆ ನಡೆದಿದ್ದು, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ನಲ್ಲಿ ಪರಿಚಯವಾದ ವ್ಯಕ್ತಿ ವಿಯಕಾ ವೆಬ್ ಸೈಟ್ ನಲ್ಲಿ ಸೇರುವಂತೆ ದೂರುದಾರರಿಗೆ ಸೂಚಿಸಿದ್ದು, ಅದರಂತೆ 75 ಜನರಿದ್ದ ಗ್ರೂಪ್ ನಲ್ಲಿ ಒಟ್ಟು 3 ಲಕ್ಷ ರೂ. ಹೂಡಿಕೆ ಮಾಡಿದ್ದರು. ಇದರಿಂದ ಒಮ್ಮೆಗೆ 20 ಲಕ್ಷ ರೂ. ವರೆಗೆ ಲಾಭ ಆಗಿತ್ತು. ಮತ್ತೆ ಅದೇ ವ್ಯಕ್ತಿಯ ಶಿಫಾರಸಿನಂತೆ ವ್ಯವಹಾರ ಮಾಡಿ, ಗಳಿಸಿದ ಹಣವನ್ನೆಲ್ಲ ಕಳಕೊಂಡಿದ್ದರು. ಈ ಬಗ್ಗೆ ಆತನಲ್ಲಿ ಕೇಳಿದಾಗ, ಎಕ್ಸ್ ಚೇಂಜ್ ನಲ್ಲಿ ಹೊಸ ಕಾಯಿನ್ ಬಿಡುಗಡೆ ಆಗುತ್ತಿದ್ದು, ಅದಕ್ಕೆ ಹೂಡಿಕೆ ಮಾಡಿದರೆ ತುಂಬ ಲಾಭ ಬರುತ್ತದೆ ಎಂದು ನಂಬಿಸಿದ್ದ.
ಕಳಕೊಂಡಿರುವ ಹಣವನ್ನು ಮತ್ತೆ ಗಳಿಸುವ ಉದ್ದೇಶದಿಂದ ಚಿನ್ನವನ್ನು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ಮತ್ತೆ ಹೂಡಿಕೆ ಮಾಡಲು ಆರಂಭಿಸಿದ್ದರು. ವಿಯಕಾ ಕಸ್ಟಮರ್ ಕೇರ್ ಎಂದು ಪರಿಚಯಿಸಿಕೊಂಡಿದ್ದ ರವಿಕುಮಾರ್ ಎಂಬಾತನ ಸಲಹೆಯಂತೆ ತನ್ನ ಖಾತೆಯಿಂದ 16.29 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಇದರಲ್ಲಿ ಮತ್ತೆ ಲಾಭ ಬಂದಿರುವುದನ್ನು ತೋರಿಸಿದ್ದು, ಆ ಹಣವನ್ನು ಹಿಂತಿರುಗಿ ಪಡೆಯಲು ಹೋದಾಗ ಜೂನ್ 23ರ ವರೆಗೆ ಡಿಪಾಸಿಟ್ ಮೊಬಿಲೈಜೇಶನ್ ಅವಧಿ ಆಗಿರುವುದರಿಂದ ತೆಗೆಯಲು ಆಗುವುದಿಲ್ಲ ಎಂದು ತೋರಿಸಿತ್ತು.
ಜೂನ್ 24ರಂದು ಮತ್ತೆ ಹಣ ತೆಗೆಯಲು ಹೋದಾಗ, ಭಾರತದಲ್ಲಿ ಕಪ್ಪು ಹಣದ ಹಾವಳಿ ಇದೆ. ನಿನ್ನಲ್ಲಿ ಇರುವ ಎಲ್ಲ ಕಾಯಿನ್ ಗಳನ್ನು ಮಾರಿ ಬಿಡುವಂತೆ ಸಲಹೆ ನೀಡಿದ್ದಾನೆ. ಆನಂತರ, ವೆರಿಫಿಕೇಶನ್ ಪ್ರೊಸೆಸ್ ಆಗಬೇಕು. ಅದಕ್ಕೆ ಶೇ. 10ರಷ್ಟು ದುಡ್ಡು ಕಟ್ಟಬೇಕು ಎಂದು ತಿಳಿಸಿದ್ದಾನೆ. ದೂರುದಾರರು ನನ್ನಲ್ಲಿ ಅಷ್ಟು ಮೊತ್ತ ಇಲ್ಲವೆಂದು ಹೇಳಿದಾಗ, ಹಾಗಾದರೆ ನಿನ್ನ ಎಲ್ಲ ಹೂಡಿಕೆ ಮೊತ್ತವನ್ನು ಮುಟ್ಟುಗೋಲು ಹಾಕುತ್ತಾರೆ ಎಂದು ಹೇಳಿ ಹೆದರಿಸಿದ್ದಾನೆ. ಹೂಡಿಕೆ ಮಾಡಿದ ಹಣವನ್ನು ಮರಳಿ ನೀಡದೆ ಮೋಸ ಮಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ದೂರಿನಲ್ಲಿ ತಿಳಿಸಿದ್ದಾರೆ.
Bitcoin scam online fraud, Mangalore man looses 16 lakh rupees online. A case has been registered at the cyber police station. He was introduced to a friend via Facebook and later was suggested to join a group and later has lost 16 lakhs online.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm