ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm