ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm