ಬ್ರೇಕಿಂಗ್ ನ್ಯೂಸ್
15-07-24 07:46 pm HK News Desk ಕ್ರೈಂ
ಬೆಳಗಾವಿ, ಜುಲೈ 15: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು, ಫೋನ್ ಮಾಡಿ ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಅರವಿಂದ ಅರಗೊಂಡ ಬಂಧಿತ ಆರೋಪಿ.
ಬೆಳಗಾವಿಯ ಕೊಲ್ಹಾಪುರ ಸರ್ಕಲ್ನಲ್ಲಿ ಆಫೀಸ್ ಮಾಡಿಕೊಂಡಿದ್ದ ಆರೋಪಿ, ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನೆ ಟಾರ್ಗೆಟ್ ಮಾಡುತ್ತಿದ್ದ. ಬೆಳಗಾವಿಯಲ್ಲಿ ಸುಮಾರು 10 ಜನರಿಂದ ಬರೋಬ್ಬರಿ 1 ಕೋಟಿ 8 ಲಕ್ಷ ರೂ. ಹಣವನ್ನು ಪಡೆದಿದ್ದ. ಬೆಳಗಾವಿಯಲ್ಲಿ ಅಷ್ಟೇ ಅಲ್ಲದೇ ಮುಂಬೈನಲ್ಲೂ ಬ್ರಾಂಚ್ ಓಪನ್ ಮಾಡಿದ್ದ ಖದೀಮ ನೀಟ್ ಪರೀಕ್ಷೆ ಬರೆದು ಕಡಿಮೆ ಅಂಕ ಪಡೆದವರನ್ನು ಗುರುತಿಸಿ ಅವರಿಗೆ ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟ್ ಕೊಡುವುದಾಗಿ ನಂಬಿಸಿದ್ದ. ಡ್ರೈವರ್ ಮೊಬೈಲ್ ಟ್ರೇಸ್ ಮಾಡಿದ್ದರಿಂದ ವಂಚಕ ಸಿಕ್ಕಿ ಬಿದ್ದಿದ್ದಾನೆ. ಮುಂಬೈಗೆ ಹೋಗಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಪೊಲೀಸರು ಕರೆ ತಂದಿದ್ದರು. ಸದ್ಯ ಆರೋಪಿ ಅರವಿಂದ ಅರಗೊಂಡ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈತನಿಂದ 12 ಲಕ್ಷ ನಗದು, 15 ಕಂಪ್ಯೂಟರ್, 1 ಲ್ಯಾಪಟಾಪ್ ಸೇರಿ ಒಟ್ಟು 12,66,900 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ 10 ಜನರಿಗೆ ಮೋಸ ಮಾಡಿದ್ದ ಆರೋಪಿ ಅರವಿಂದ ಅರಗೊಂಡ ಮುಂಬೈಗೆ ಹಾರಿದ್ದ. ಮುಂಬೈನಲ್ಲಿ ಆಫೀಸ್ ತೆರೆದು ಅಲ್ಲಿಯೂ ನೀಟ್ ಸೀಟ್ ಕೊಡಿಸುವುದಾಗಿ ಮೋಸ ಮಾಡಲು ತಯಾರಿ ನಡೆಸಿದ್ದ. ಅಷ್ಟರಲ್ಲಾಗಲೇ ಅವನ ಜಾಲ ಹಿಡಿದು ಬೆಳಗಾವಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಆತನ ಪತ್ತೆ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಆತನ ಮೊಬೈಲ್ ನಂಬರ್ ಟ್ರೇಸ್ ಮಾಡೋಣ ಎಂದರೆ ಸಿಮ್ ಬದಲಾಯಿಸುತ್ತಿದ್ದ. ಕೊನೆಗೆ ಪೊಲೀಸರು ಆತನ ಡ್ರೈವರ್ ಮೊಬೈಲ್ ಟ್ರೇಸ್ ಮಾಡಿದಾಗ ಆರೋಪಿ ಬಲೆಗೆ ಬಿದ್ದಿದ್ದಾನೆ.
ಈ ಕುರಿತು ಡಿಸಿಪಿ ರೋಹನ್ ಜಗದೀಶ್ ಮಾತನಾಡಿ, ಆರೋಪಿ ನೀಟ್ ಕೌನ್ಸಲಿಂಗ್ ಸೆಂಟರ್ ತೆರೆದಿರುತ್ತಾನೆ. ಒಬ್ಬ ಮ್ಯಾನೇಜರ್, ಟೆಲಿಕಾಲರ್ಸ್ ಮತ್ತು ಸಿಬ್ಬಂದಿ ಸೇರಿ 12 ಜನರನ್ನು ಕೆಲಸಕ್ಕೆ ಇಟ್ಟುಕೊಂಡಿರುತ್ತಾನೆ. ಹೀಗೆ ಇವರೆಲ್ಲಾ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುತ್ತದೆಯೋ ಅವರಿಗೆ ದುಡ್ಡು ಕೊಟ್ಟರೆ ನಿಮಗೆ ಮೆಡಿಕಲ್ ಸೀಟ್ ಕೊಡಿಸುತ್ತೇನೆಂದು ನಂಬಿಸಿ ಸುಮಾರು 10 ಜನರಿಗೆ 1 ಕೋಟಿ 8 ಲಕ್ಷ ರೂ. ವಂಚಿಸಿದ್ದಾನೆ. ಹೀಗೆ ಮೋಸ ಹೋದ ಒಬ್ಬರು ಈತನ ವಿರುದ್ಧ ದೂರು ನೀಡಿದ್ದರು. ಇದಷ್ಟೇ ಅಲ್ಲದೇ ಆತನ ವಿರುದ್ಧ ತೆಲಂಗಾಣದ ಪಂಜಾಗುಟ್ಟಾ ಠಾಣೆಯಲ್ಲಿ 7 ಪ್ರಕರಣಗಳು, ಜುಬಿಲಿ ಹಿಲ್ಸ್ ಠಾಣೆಯಲ್ಲಿ 4, ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ 1, ಆರ್.ಟಿ.ನಗರ ಠಾಣೆಯಲ್ಲಿ 1, ಮಧ್ಯಪ್ರದೇಶದ ಭೂಪಾಲ್ ಕ್ರೈಮ್ ಬ್ರ್ಯಾಂಚ್ನಲ್ಲಿ 1 ಪ್ರಕರಣ ದಾಖಲಾಗಿದೆ. ಅದೇ ರೀತಿ ಮುಂಬೈನಲ್ಲೂ ಕೂಡ ಒಂದು ಆಫೀಸ್ ತೆರೆಯಲು ಸಿದ್ಧತೆ ನಡೆಸಿದ್ದ. ಆರು ತಿಂಗಳಿನಿಂದ ನಮ್ಮ ಪೊಲೀಸರು ಆತನಿಗೆ ಬಲೆ ಬೀಸಿದ್ದರು. ಕೊನೆಗೂ ಆತನ ಡ್ರೈವರ್ ಮೊಬೈಲ್ ಟ್ರೇಸ್ ಮಾಡಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.
ಆರೋಪಿ ಅರವಿಂದ ತೆಲಂಗಾಣದ ಹೈದರಾಬಾದ್ ಮೂಲದ ಎಂಬಿಎ ಪದವೀಧರ. ಈತ ಬೆಳಗಾವಿಯಲ್ಲಿ ನಕಲಿ ಆಧಾರ್ ಕಾರ್ಡ್, ಬ್ಯಾಂಕ್ ದಾಖಲೆಗಳು ಹಾಗೂ ಅಡ್ರೆಸ್ ಪ್ರೂಫ್ ತೋರಿಸಿ ಆಫೀಸನ್ನು ಬಾಡಿಗೆ ಪಡೆದಿದ್ದ. 2 ಲಕ್ಷ ರೂ. ಫೀಸ್ ಮತ್ತು 8 ಲಕ್ಷ ರೂ. ಹಣವನ್ನು ನೀಟ್ ಸೀಟ್ ಕೊಡಿಸಲು ಪ್ರತಿಯೊಬ್ಬರಿಂದ ಆರೋಪಿ ತೆಗೆದುಕೊಳ್ಳುತ್ತಿದ್ದ. ಸ್ವಲ್ಪ ದಿನ ಆದ ಬಳಿಕ ಸಿಟಿ ಬಿಟ್ಟು ಪರಾರಿಯಾಗುತ್ತಿದ್ದ ಎಂದು ಮಾಹಿತಿ ನೀಡಿದರು.
Belagavi police arrest person cheating students of getting medical seats. The arrested has been identified as Arvind.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm