ಬ್ರೇಕಿಂಗ್ ನ್ಯೂಸ್
15-07-24 08:49 pm HK News Desk ಕ್ರೈಂ
ಮೈಸೂರು, ಜುಲೈ 15: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಒಡತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದಂಪತಿಯನ್ನು ಮೈಸೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಹಾಸನ ನಗರದಲ್ಲಿ ವಾಸವಿರುವ ಚಿತ್ರದುರ್ಗ ಮೂಲದ ವನಿತಾ (24) ಹಾಗೂ ಚೇತನ್ (29) ಬಂಧಿತ ದಂಪತಿ.
ಜುಲೈ 10 ರಂದು ಮೈಸೂರಿನ ಹೆಬ್ಬಾಳದ ಒಂದನೇ ಹಂತದಲ್ಲಿ ವಾಸವಿರುವ ನಿವೃತ್ತ ಶಿಕ್ಷಕಿ ಶಾಂತಮ್ಮ ಅವರ ಖಾಲಿಯಿದ್ದ ಮಹಡಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ದಂಪತಿ ಬಂದಿದ್ದರು. ಮನೆಯ ಯಜಮಾನಿ, ದಂಪತಿಯನ್ನು ಮನೆಯೊಳಗೆ ಕರೆದು ಬಾಡಿಗೆ ಕುರಿತು ವಿವರಿಸಿದ್ದರು. ನಂತರ ದಂಪತಿ ಖಾಲಿ ಮನೆ ನೋಡಿ, ಅಡ್ವಾನ್ಸ್ ಹಣ ತರಲು ಎಟಿಎಂಗೆ ಹೋಗಿದ್ದರು, ಸ್ವಲ್ಪ ಸಮಯದ ನಂತರ ಬಂದು ಎಂಟಿಎಂ ವರ್ಕ್ ಆಗುತ್ತಿಲ್ಲ ಎಂದಿದ್ದರು. ನಂತರ ಮನೆಯ ಯಜಮಾನಿಗೆ ನಿಮ್ಮಲ್ಲಿ ಫೋನ್ ಪೇ ಅಥವಾ ಗೂಗಲ್ ಪೇ ಇದೆಯಾ ಎಂದು ಕೇಳಿದ್ದರು, ಅದಕ್ಕೆ ಅವರು ಇಲ್ಲ ಎಂದು ಹೇಳಿದ್ದರು. ಬಳಿಕ ದಂಪತಿ, ಮನೆ ಹುಡುಕಿ ತುಂಬಾ ಸುಸ್ತಾಗಿದೆ ಸ್ವಲ್ಪ ಸಮಯ ಇಲ್ಲೇ ವಿಶ್ರಾಂತಿ ಪಡೆಯುತ್ತೇವೆ ಎಂದು ಹೇಳಿ ಮನೆಯಲ್ಲಿ ಉಳಿದುಕೊಂಡಿದ್ದರು. ಬಳಿಕ ಮನೆಯ ಯಜಮಾನಿ ಶಾಂತಮ್ಮ ಮಾರುಕಟ್ಟೆ ಹೋಗಿ ಅರ್ಧ ಗಂಟೆ ನಂತರ ಮನೆಗೆ ವಾಪಸ್ ಆಗಿದ್ದರು. ಮನೆಗೆ ಬಂದ ಶಾಂತಮ್ಮನಿಗೆ ನಾವು ಟ್ರೈನ್ಗೆ ಹೋಗುತ್ತೇವೆ, ಕುಡಿಯಲು ನೀರು ತರುವಂತೆ ಹೇಳಿದ್ದರು. ನೀರು ತರಲು ಹೋದ ಶಾಂತಮ್ಮನ ಹಿಂದೆ ಹೋದ ಚೇತನ್, ಅವರನ್ನು ಹಿಡಿದು ಕಟ್ಟಿ ಹಾಕಿ ಮೈ ಮೇಲೆ ಇದ್ದ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ್ದರು. ಬಳಿಕ ಮಾಲಕಿಯ ಕಣ್ಣಿಗೆ ಖಾರದ ಪುಡಿ ಎರಚಿ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಸ್ವಲ್ಪ ಸಮಯದ ನಂತರ ಎಚ್ಚರಗೊಂಡ ಶಾಂತಮ್ಮ ಕಿರುಚಾಡಿದಾಗ ನೆರೆಹೊರೆಯವರು ಬಂದು ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದರು. ಘಟನೆ ಸಂಬಂಧ ಶಾಂತಮ್ಮನ ಸೊಸೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಖತರ್ನಾಕ್ ದಂಪತಿಯನ್ನು ಮೂರೇ ದಿನದಲ್ಲೇ ಬಂಧಿಸಿ, ಅವರಿಂದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ. ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
Hassan couple arrested over robbery of gold from house in Mysuru. The arrested have been identified as Vanitha and Chethan. They attacked the house owner and had stolen the gold from her house.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm