ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm