ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am