ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm