ಬ್ರೇಕಿಂಗ್ ನ್ಯೂಸ್
30-07-24 11:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 30: ಒಂದು ವರ್ಷದ ಹಿಂದೆ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲಾಗಿದ್ದ ಮುಂಬೈ ಮೂಲದ ವ್ಯಕ್ತಿಯೊಬ್ಬ ವಿಶೇಷ ಚೇತನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನಿರ್ದೋಷಿಗಳೆಂದು ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
2023ರ ಆಗಸ್ಟ್ 16ರಂದು ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಪೂರ್ತಿಗೊಳಿಸಿ ಆರೋಪಿಗಳನ್ನು ನಿರಪರಾಧಿಗಳು ಎಂದು ಘೋಷಿಸಿ ಬಿಡುಗಡೆ ಮಾಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ಮುಂಬೈನಲ್ಲಿ ನೆಲೆಸಿರುವ ಅಬ್ದುಲ್ ಹಲೀಂ(37) ಹಾಗೂ ಆತನಿಗೆ ಸಹಕಾರ ನೀಡಿದ್ದ ಕುಲಶೇಖರ ನಿವಾಸಿ ಶಮೀನಾ ಬಾನು(22) ಎಂಬವರ ವಿರುದ್ಧ ದೂರು ದಾಖಲಾಗಿತ್ತು.
ಮನ್ಸೂರ್ ಅಹಮದ್ ಬಾಬಾ ಶೇಖ್ ಮತ್ತು ಆರೋಪಿ ಅಬ್ದುಲ್ ಹಲೀಂ ಸ್ನೇಹಿತರಾಗಿದ್ದು, 2023ರ ಆಗಸ್ಟ್ 10ರಂದು ಕಾಸರಗೋಡಿನಿಂದ ಬೈಕ್ನಲ್ಲಿ ಹಿಂತಿರುಗುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ, ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರೂ ಆಸ್ಪತ್ರೆಯ ಒಂದೇ ಕೋಣೆಯಲ್ಲಿದ್ದರು. ಈ ಸಂದರ್ಭದಲ್ಲಿ ಮನ್ಸೂರ್ ಶೇಖ್ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ವಿಶೇಷ ಚೇತನ ಮಗಳನ್ನು ಆಕೆಯ ತಾಯಿ ಬಿಟ್ಟು ಹೋಗಿದ್ದಳು.
ಈ ವೇಳೆ, ಶಮೀನಾ ಬಾನು ನೆರವಿನಲ್ಲಿ ಮುಂಬೈ ಮೂಲದ ಅಬ್ದುಲ್ ಹಲೀಂ ವಿಕಲಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆ ಮಾಡಿದೆ. 1ನೇ ಆರೋಪಿ ಪರವಾಗಿ ಮಂಗಳೂರಿನ ವಕೀಲರುಗಳಾದ ಜಗದೀಶ ಕೆ.ಆರ್, ಪ್ರಸಾದ್, ಹೇಮಂತ್, ಪ್ರಜ್ಞಾ ಹಾಗೂ 2ನೇ ಆರೋಪಿ ಪರವಾಗಿ ವಿವೇಕ್ ಮುಲ್ಕಿ, ಕೃಷ್ಣ ಕಾರಂತ್, ಚೇತನಾ ಕೆ, ಅಲೇಖ್ಯ ಕೆ. ಇವರು ವಕಾಲತ್ತು ನಡೆಸಿದ್ದರು.
Rape case in Indiana hospital in Mangalore, accused acquitted. 2023 mentally challenged girl had accused of rape by the accused when she was admitted in the hospital.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm