ಬ್ರೇಕಿಂಗ್ ನ್ಯೂಸ್
06-08-24 09:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ 13 ವರ್ಷದ ಬಾಲಕಿಯನ್ನು ಯಾರೋ ದುರುಳರು ಬಟ್ಟೆಯಲ್ಲಿ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಹನುಮಂತು ಎಂಬವರು ಜೋಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಕೋಣಾಜೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಿಯುತ್ತಿದ್ದ ಇವರ ತಮ್ಮನ ಮಗಳು 13 ವರ್ಷದ ಬಾಲಕಿ ಊರಿಗೆ ಹೋಗಿ ಹಿಂತಿರುಗಿದ್ದು, ಕೈ ನೋವೆಂದು ಶಾಲೆಗೆ ಹೋಗದೆ ಇವರದೇ ಮನೆಯಲ್ಲಿ ಉಳಿದುಕೊಂಡಿದ್ದಳು. ನಾಲ್ಕು ದಿನಗಳಿಂದ ಇದೇ ಮನೆಯಲ್ಲಿ ಬಾಲಕಿ ನೆಲೆಸಿದ್ದು ಮಂಗಳವಾರ ಬೆಳಗ್ಗೆ ಹನುಮಂತು ಮತ್ತು ಇತರರು ತಮ್ಮ ಕೆಲಸಕ್ಕೆ ತೆರಳಿದ್ದರು.

ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿದ್ದು, ತನ್ನ ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಅದರಂತೆ, ಪಕ್ಕದ ಮನೆಯವರು ಅಲ್ಲಿಗೆ ತೆರಳಿ ನೋಡಿದಾಗ, ಬಾಲಕಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಹನುಮಂತು ಅವರನ್ನು ಸ್ಥಳಕ್ಕೆ ಕರೆಸಿದ್ದು, ಪರಿಶೀಲನೆ ವೇಳೆ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಸಾಯಿಸಿದ ರೀತಿ ಕಂಡುಬಂದಿದೆ. ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾರೋ ಹೊರಗಿನವರು ಮನೆಯ ಒಳಗೆ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ಯತ್ನ ಆಗಿದೆಯೇ ಎನ್ನುವ ಬಗ್ಗೆ ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕೆಯ ಮೇರೆಗೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.
Mangalore 13 year old girl from Belagavi murdered in Jokatte. A 13-year-old girl from Belagavi was found dead with a cloth around her neck in a rental house in Jokatte, where she had been staying for the past four days for treatment of a hand injury. Prima facie, murder is suspected.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm