ಬ್ರೇಕಿಂಗ್ ನ್ಯೂಸ್
06-08-24 09:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ 13 ವರ್ಷದ ಬಾಲಕಿಯನ್ನು ಯಾರೋ ದುರುಳರು ಬಟ್ಟೆಯಲ್ಲಿ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಹನುಮಂತು ಎಂಬವರು ಜೋಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಕೋಣಾಜೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಿಯುತ್ತಿದ್ದ ಇವರ ತಮ್ಮನ ಮಗಳು 13 ವರ್ಷದ ಬಾಲಕಿ ಊರಿಗೆ ಹೋಗಿ ಹಿಂತಿರುಗಿದ್ದು, ಕೈ ನೋವೆಂದು ಶಾಲೆಗೆ ಹೋಗದೆ ಇವರದೇ ಮನೆಯಲ್ಲಿ ಉಳಿದುಕೊಂಡಿದ್ದಳು. ನಾಲ್ಕು ದಿನಗಳಿಂದ ಇದೇ ಮನೆಯಲ್ಲಿ ಬಾಲಕಿ ನೆಲೆಸಿದ್ದು ಮಂಗಳವಾರ ಬೆಳಗ್ಗೆ ಹನುಮಂತು ಮತ್ತು ಇತರರು ತಮ್ಮ ಕೆಲಸಕ್ಕೆ ತೆರಳಿದ್ದರು.

ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿದ್ದು, ತನ್ನ ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಅದರಂತೆ, ಪಕ್ಕದ ಮನೆಯವರು ಅಲ್ಲಿಗೆ ತೆರಳಿ ನೋಡಿದಾಗ, ಬಾಲಕಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಹನುಮಂತು ಅವರನ್ನು ಸ್ಥಳಕ್ಕೆ ಕರೆಸಿದ್ದು, ಪರಿಶೀಲನೆ ವೇಳೆ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಸಾಯಿಸಿದ ರೀತಿ ಕಂಡುಬಂದಿದೆ. ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾರೋ ಹೊರಗಿನವರು ಮನೆಯ ಒಳಗೆ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ಯತ್ನ ಆಗಿದೆಯೇ ಎನ್ನುವ ಬಗ್ಗೆ ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕೆಯ ಮೇರೆಗೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.
Mangalore 13 year old girl from Belagavi murdered in Jokatte. A 13-year-old girl from Belagavi was found dead with a cloth around her neck in a rental house in Jokatte, where she had been staying for the past four days for treatment of a hand injury. Prima facie, murder is suspected.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm