ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm