ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm