ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm