ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm