ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm