ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm