ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm