ಬ್ರೇಕಿಂಗ್ ನ್ಯೂಸ್
26-08-24 12:43 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 26: ಕಾರ್ಕಳ ಯುವತಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಮಾದಕ ದ್ರವ್ಯ ಸೇವನೆ ಕುರಿತು ಸಂತ್ರಸ್ತೆ ಹಾಗೂ ಆರೋಪಿಗಳ ರಕ್ತದ ಪರೀಕ್ಷೆ ನಡೆಸಲಾಗಿದ್ದು, ಸಂತ್ರಸ್ತೆಯ ವರದಿಯಲ್ಲಿ ಪಾಸಿಟಿವ್ ಬಂದಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ರಕ್ತದ ಮಾದರಿಯಲ್ಲಿ ಮಾದಕ ದ್ರವ್ಯ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆರೋಪಿ ಅಲ್ತಾಫ್ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆತ ತನ್ನ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಈ ಪುಡಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದು ಯಾವ ಮಾದರಿಯ ಮಾದಕ ದ್ರವ್ಯ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದರು.
ಯುವತಿಯ ರಕ್ತದಲ್ಲಿ ಕಂಡುಬಂದಿರುವ ಮಾದಕ ದ್ರವ್ಯ ಹಾಗೂ ಆರೋಪಿ ತೋರಿಸಿರುವ ಮಾದಕ ದ್ರವ್ಯ ಒಂದೇ ಆಗಿದೆಯೇ ಎಂಬುದನ್ನು ತುಲನೆ ಮಾಡಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಾದಕ ದ್ರವ್ಯಕ್ಕೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಮಾದಕ ದ್ರವ್ಯವನ್ನು ಎಲ್ಲಿಂದ ತರಲಾಗಿದೆ ಮತ್ತು ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ. ನೊಂದ ಯುವತಿಯು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಲು ಬಾಕಿ ಇದ್ದು, ಆಕೆ ಚೇತರಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆ ಮೂಲಕ ಆದಷ್ಟು ಬೇಗ ಈ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
Karkala gang rape case, victim girl tested positive for consuming drugs says Udupi SP Arun. Accused Althaf had some powder kept in his car after which he has stated the girl to consume it. The Udupi JMFC court has remanded two of the accused in the gang rape case of a 21-year-old girl in Aiyyapana Nagara to police custody for four days.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am