ಬ್ರೇಕಿಂಗ್ ನ್ಯೂಸ್
29-08-24 09:02 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.29: ಯುವತಿಯೊಬ್ಬಳು ಕೃಷ್ಣಾಷ್ಟಮಿ ಪ್ರಯುಕ್ತ ರೈಲಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದಾಗ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿದ್ದು ದೂರು ದಾಖಲಾದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ.
ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಶನಿವಾರ ರಾತ್ರಿ ಊರಿಗೆ ಹೊರಟಿದ್ದರು. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಯುವಕನೋರ್ವ ಅಸಭ್ಯ ವರ್ತನೆ ತೋರಿದ್ದಾನೆ. ಇನ್ನೇನು ಉಡುಪಿ ತಲುಪಲು ಅರ್ಧ ಗಂಟೆ ಇರುವಾಗ ಮೈಗೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದು ಜೋರು ಮಾಡುತ್ತಲೇ ಆರೋಪಿ ಶುರೈಮ್ ಕ್ಷಮೆ ಯಾಚಿಸಿದ್ದಾನೆ. ಇದೇ ವೇಳೆ, ಯುವತಿ ಆತನ ಫೋಟೊವನ್ನು ಕ್ಲಿಕ್ಕಿಸಿಕೊಂಡಿದ್ದರು.
ಉಡುಪಿಯಲ್ಲಿ ರೈಲಿನಿಂದ ಇಳಿಯುತ್ತಲೇ ರೈಲ್ವೆ ಪೊಲೀಸ್ಗೆ ಯುವತಿ ಮಾಹಿತಿ ನೀಡಿದ್ದಾರೆ. ರೈಲ್ವೆ ಆ್ಯಪ್ ಮೂಲಕವೂ ದೂರು ದಾಖಲಿಸಿದ್ದರು. ಯುವತಿ ನೀಡಿದ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ದೂರು ಮತ್ತು ಫೋಟೊ ಹಿಡಿದು ಶೋಧಕ್ಕಿಳಿದ ಪೊಲೀಸರು ಮೊದಲಿಗೆ ಅಂದು ರೈಲಿನಲ್ಲಿ ಪ್ರಯಾಣಿಸಿದ್ದ ಎಲ್ಲ ಪ್ರಯಾಣಿಕರ ವಿವರ ಪಡೆದಿದ್ದಾರೆ. ಘಟನೆ ನಡೆದದ್ದು ವೀಕೆಂಡ್ ಆದ ಹಿನ್ನೆಲೆ ಬೆಂಗಳೂರು-ಮುರ್ಡೇಶ್ವರ ನಡುವೆ ಸಂಚರಿಸುವ ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಸಿದ್ದರು. ದೂರಿನಲ್ಲಿ ನೀಡಿದ್ದ ಮಾಹಿತಿ ಆಧರಿಸಿ ಮೂರು ಹಂತಗಳಲ್ಲಿ ಶಾರ್ಟ್ ಲಿಸ್ಟ್ ಮಾಡಿ ಶೋಧ ನಡೆಸಿದ್ದಾರೆ. ಜೊತೆಗೆ, ಉಡುಪಿ ಮತ್ತು ಆನಂತರದ ನಿಲ್ದಾಣಗಳಲ್ಲಿ ಇಳಿದು ಹೋದವರನ್ನು ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಭಟ್ಕಳದಲ್ಲಿ ಇಳಿದಿದ್ದನ್ನ ಪತ್ತೆಹಚ್ಚಿದ ಪೊಲೀಸರು ಆತನ ಮಾಹಿತಿ ಪಡೆದು ನೇರವಾಗಿ ಭಟ್ಕಳದ ನಿವಾಸದಿಂದಲೇ ಬಂಧಿಸಿದ್ದಾರೆ. ಹೆಸರು, ಮಾಹಿತಿ ಇಲ್ಲದಿದ್ದರೂ ಪೊಲೀಸರು ಕರಾರುವಾಕ್ಕಾಗಿ ಕಾರ್ಯಾಚರಣೆ ನಡೆಸಿದ್ದು ಶ್ಲಾಘನೆಗೆ ಪಾತ್ರವಾಗಿದೆ.
The 22-year-old man, who tried to sexually assault a woman software professional on a running train in the Udupi district of Karnataka, has been arrested, said officials here on Thursday. The incident happened on an express train on Sunday as the woman was travelling from Bengaluru to Manipal town near Udupi City.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm