ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm