ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm